Wednesday, May 9, 2012


Puttur Shridhara Bhandari
An eminent Yaksagana artist need your help
Puttur Shridhara Bhandari (Born 1945, October), a celebrated Yakshagana artiste, admired by all for his unparalleled ‘Pundu Vesha’ (Young Character),  is now suffering from knee injury. He has undergone knee operation and his doctor at Mangalore, Dr. Shantarama Shetty replaced his knee a few weeks ago.

 Shridhara Bhandari (66) recently collapsed on stage while performing dheengina, which is a vigorously jumping and turning mid-air in pundu vesha performance.  The man who danced and ruled the Yakshagana theater continuously for more than 55 years is now in bed and finding hard to move. With these, an era of Pundu vesha is in the verge of its end.  

Born at Bannur in Puttur taluk of Dakshina Kannada, Mr. Bhandari started performing Yakshagana from the age of 12. Initially,  he was in the Ballambetta Mela and then joined the renowned Shri Dharmasthala Mela where he performed for 45 years. In between,  he managed Kanteshawara Mela and Puttur Mela for 11 years. All these years Mr. Bhanadari was doing the ‘pundu vesha’- the youthful characters such as Abhimanyu, Krishna, Sudhanva, Parashurama, Vrushaketu, Lava-Kusha, etc. Over the years, his name has become synonymous with the character of Abhimanyu, which is one of his favorites. The audience at National Theater, Tokyo applauded his wonderful performance with standing ovation during his tour to Japan (1992). 

Admirers of him are planning to help this ailing, talented and celebrated Yakshagana artist by raising a fund to facilitate his medical expenditure. It is requested to contribute generously.

Your generous contributions to Shridhara Bandari will be worth its value if it can bring smile on the face of a great artiste of our time.

Bank Cheque /Demand Draft may be drawn in the name of ‘Shridhara Bhandari’ payable at Puttur and may be posted to 
Putturu Shridhara Bhandari
Yakshagana Artist
Bannur House
Post Bannuru
Puttur Taluk
Dakshina Kannada District Karnataka

Vasantha Shetty Bellare                                                Dr. Purushottama Bilimale 
Dehali Mitra                                                                 6098/8, Sector D, Pocket-6,
Vasantkunj, New Delhi-110070
                                                                                    9811733378

Sunday, January 1, 2012

೨೦೧೨

೨೦೧೨ ಎಲ್ಲರಿಗೂ ಶುಭ ತರಲಿ
ಜಗತ್ತಿನಲ್ಲಿ ಶಾಂತಿ ನೆಲೆಸಲಿ

Sunday, December 18, 2011

Katrin Binder

Katrin Binder, a doctoral scholar of Indology and currently teaching Kannada at Wurzburg University, Germany arrived in New Delhi on her way to Udupi in Karnataka, spent a quite evening of winter sharing her thoughts and experiences among some Yakshagana enthusiasts on 17 Dec 2011.
Read detailed report in http://www.kempukote.blogspot.com/

Tuesday, December 13, 2011


Delhi Karnataka Sangha

Rao Tula Ram Marg

Sector 12, RK Puram

New Delhi

Cordially invite you to a special lecture by

Dr. Katrin Binder

Department of Indology, Wurzburg University, Germany

On

Yakshaganapriya :

Impressions and experiences of a foreigner who fell in love with Yakshagana

On December 17, 2011 at 4 pm at Sangha Seminar Hall


Dr. Katrin Binder is currently teaching Kannada at Wurzburg University, Germany. She was a DAAD/ ICCR Fellow during 2001-2002 and has done an Intensive field work on ‘Abhimanyu Kalaga’. During 2008, she has submitted her Ph. D thesis on the subject “ Yakshgana Rangabhumi”

Dr. Katrin has learned and performed Yakshagana under Guru Sanjeeva Suvarna, at Yakshagana Kendra, Udupi. Her other areas of work are modern Kannada literature and drama, history of Basel Mission in Karnataka

Monday, November 21, 2011

ಹೀಗೊಂದು ನಾಟಕ


ಮೆಸೇಜ್ ಬಂತು ದೆಹಲಿಯಲ್ಲಿ

ನಾಟಕದಲ್ಲಿ ಹೀಗೆ



ಮೆಸೇಜ್ ಬಂತು

Sunday, October 16, 2011

ಅಮವಾಸ್ಯೆ ಜಾತಕ ಮತ್ತು ನನ್ನ ಶಾಲೆ


ನಾನು ಒಂದು ಆದಿತ್ಯವಾರ, ಅಮವಾಸ್ಯೆಯ ದಿವಸ ರಣ ರಣ ಮಧ್ಯಾಹ್ನ ಜನಿಸಿದೆನಂತೆ. ನನ್ನ ತಂದೆ-ತಾಯಿಯರಿಗೆ ನಾನು ಮೂರನೇ ಮಗು, ಮೊದಲನೆಯದೆರಡು ಗಂಡಾಗಿದ್ದರಿಂದ ಸಹಜವಾಗಿ ಅವರಿಗೆ ಮೂರನೆಯದು ಹೆಣ್ಣಾಗಬೇಕೆಂಬ ಆಸೆ ಇತ್ತು. ಆದರೆ ಅವರ ನಿರೀಕ್ಷೆಗೂ ಮೀರಿ, ಅದೂ ಅಮವಾಸ್ಯೆಯ ದಿನ ಮಧ್ಯಾಹ್ನ ನಾನು ಹುಟ್ಟಿಬಿಟ್ಟೆ. ಹಾಗೆ ನಾನು ಹುಟ್ಟುವಾಗ ತಂದೆ-ತಾಯಿಯರಿಗೆ ಅವರದ್ದೇ ಆದ ನೆಲ, ಮನೆ, ಬದುಕು ಯಾವುದೂ ಇರಲಿಲ್ಲ. ಇಂಥ ಪರಿಸ್ಥಿತಿಯಲ್ಲಿ ಹೀಗೆ ಹುಟ್ಟಿದ ಮಗುವಿನ ಭವಿಷ್ಯ ಹೇಗಿರಬಹುದೆಂಬ ಕುತೂಹಲದಿಂದ ತಂದೆಯವರು ಕೇರಳ ಕರ್ನಾಟಕ ಗಡಿಭಾಗದ ಜ್ಯೋತಿಷಿಯೊಬ್ಬನಿಂದ ನನ್ನ ಜಾತಕ ಬರೆಯಿಸಿದರು. ಆತ ಯಥಾಪ್ರಕಾರ ಹುಟ್ಟಿದ ಕ್ಷಣದ ಎಲ್ಲ ಗ್ರಹಗಳನ್ನು ಕರಾರುವಾಕ್ಕಾಗಿ ಕಂಡು ಹಿಡಿದು "ಈ ಜಾತಕನಿಗೆ ವಿದ್ಯಾಯೋಗವಿಲ್ಲವು" ಎಂದು ಬರೆದು ಬಿಟ್ಟ. ತಂದೆ ಕಂಗಾಲಾಗಿರಬೇಕು.
ನಮ್ಮ ತಂದೆಗೆ ಯಕ್ಷಗಾನ ನೋಡುವ, ಅದರಲ್ಲಿ ಆಗೀಗ ವೇಷ ಹಾಕುವ, ತಾಳಮದ್ದಳೆಯಲ್ಲಿ ಕುಳಿತು ಅರ್ಥ ಹೇಳುವ ಹುಚ್ಚಿತ್ತು. ಅದರಿಂದಾಗಿ ಅವರ ಲೋಕಜ್ಞಾನ ಸಾಕಷ್ಟು ವಿಸ್ತಾರವಾಗಿತ್ತು. ಹೀಗಾಗಿ ಮಕ್ಕಳು ಚೆನ್ನಾಗಿ ಓದಿದರೆ, ಭಯಾನಕ ಬಡತನ ಮತ್ತು ಶೋಷಣೆಗಳಿಂದ ಪಾರಾಗಿಬಿಡಬಹುದು ಎಂಬ ಸರಳ ತಿಳಿವಳಿಕೆ ಅವರಿಗಿತ್ತು. ಆದರೇನು ಮಾಡೋಣ? ಜಾತಕದಲ್ಲಿ ವಿದ್ಯಾಯೋಗ ಇಲ್ಲವೆಂದು ಬರೆದಾಗಿದೆಯಲ್ಲ? ಆದರೆ ನನ್ನ ಅಮ್ಮನ ತರ್ಕ ಯಾವಾಗಲೂ ಅಪ್ಪನಿಗಿಂತ ಬೇರೆ. ’ಜಾತಕ ಹೇಗಾದರೂ ಇರಲಿ, ನಾವು ಮಾಡುವ ಪ್ರಯತ್ನ ಮಾಡಲೇಬೇಕು’, ಎಂಬುದು ಅವಳ ವಾದ. ಹಾಗೂ ಹೀಗೂ ಐದು ವರ್ಷ ಕಳೆದು ಆರನೇ ವರ್ಷಕ್ಕೆ ಕಾಲಿಡುವಾಗ ಮಗನನ್ನು ಶಾಲೆಗೆ ಸೇರಿಸುವುದೋ ಬಿಡುವುದೋ ಎಂಬ ಬಗ್ಗೆ ತಂದೆ-ತಾಯಿಯರ ನಡುವೆ ಸಾಕಷ್ಟು ವಾದ-ವಿವಾದ ಬೆಳೆದು ಕೊನೆಗೂ ಶಾಲೆಗೆ ಸೇರಿಸುವುದೆಂದು ನಿರ್ಧರಿಸಲಾಯಿತು. ಈ ವಾದ ವಿವಾದಗಳೆಲ್ಲ ನನಗಿನ್ನೂ ನೆನಪಿದೆ. ಆಗ ನಾವೆಲ್ಲ ಪಶ್ಚಿಮ ಘಟ್ಟದ ದಟ್ಟ ಕಾಡಿನ ನಡುವಣ ’ವಾಟೆಕಜೆ’ ಎಂಬ ಸ್ಥಳದಲ್ಲಿದ್ದೆವು. ಆ ಕಾಡಲ್ಲಿ ನಮ್ಮದೊಂದೇ ಮನೆ. ಇಲ್ಲಿಂದ ಸುಮಾರು ಎರಡು ಕಿ.ಮೀ. ದೂರ ಕಾಡಲ್ಲಿ ಇಳಿಯುತ್ತಾ ನಡೆದರೆ, ( ಮಲೆಘಟ್ಟ ಸೋಪಾನ ಕೆಳಪಟ್ಟಿಯಲಿ ಉರುಳು....) ಅಲ್ಲೊಂದು ಧುಮ್ಮಿಕ್ಕಿ ಹರಿಯುವ ಹೊಳೆಯಿದೆ. ಆ ಹೊಳೆಯ ನಡುವಣ ಬಂಡೆಗಳನ್ನು ಚಾಕಚಕ್ಯತೆಯಿಂದ ಹಾರಿ ಹೊಳೆ ದಾಟಿ ಮುಂದೆ ಸುಮಾರು ಮೂರು ಕಿ.ಮೀ. ದೂರ ನಡೆದರೆ ಅಲ್ಲೊಂದು ಶಾಲೆ. ಆ ಶಾಲೆಗೆ ಸೇರುವುದು ನನಗೂ ಆಸೆ. ಬೇರೆ ಮನುಷ್ಯರನ್ನು ನೋಡಲಿರುವ ಏಕೈಕ ಸ್ಥಳವದು.
ಸರಿ. ಶಾಲೆಗೆ ಹೊರಡುವ ಸಕಲ ಸಿದ್ಧತೆಗಳಾದವು. ಜೂನ್ ತಿಂಗಳ ಒಂದು ಮುಂಜಾನೆ ಅಪ್ಪ ನನ್ನನ್ನು ಪಂಜ ಎಂಬ ನಾಲ್ಕಂಗಡಿಗಳ ಪೇಟೆಗೆ ಕರೆದೊಯ್ದರು. ಆ ಪೇಟೆ ಆಗ ನನಗೆ ಮಾಯಾನಗರಿ ಎಂಬಂತೆ ಕಾಣತೊಡಗಿತ್ತು. ಆಲ್ಲಿಯ ’ಮರಿಯಾ ಮಹಲ್’ ಎಂಬ ಅಂಗಡಿಯಲ್ಲಿ ಕುಳಿತಿದ್ದ ದರ್ಜಿಯ ಬಳಿ ಕರೆದೊಯ್ದ ನನ್ನ ತಂದೆ, ’ಈತ ಶಾಲೆ ಸೇರುವವನಿದ್ದಾನೆ. ಇವನಿಗೆ ಎಷ್ಟು ಸಲ ಹಾಕಿದರೂ ಹರಿದು ಹೋಗದಂಥ ದಪ್ಪ ಬಟ್ಟೆಯೊಂದರಿಂದ ಅಂಗಿಯೂ, ಅದಕ್ಕಿಂತ ಇನ್ನೂ ಸ್ವಲ್ಪ ದಪ್ಪದ ಬಟ್ಟೆಯಿಂದ ಚೆಡ್ಡಿಯೊಂದನ್ನು ಹೊಲಿದುಕೊಡಬೇಕೆಂದೂ’ ಕೇಳಿಕೊಂಡರು. ಜೊತೆಗೆ ಸುಮಾರು ೧೦ ಕಿ.ಮೀ. ದಿನನಿತ್ಯ ನಡೆದು ಚೀಲ ಹೆಗಲಿಗೇರಿಸಿಕೊಂಡು ಶಾಲೆಗೆ ಹೋಗಬೇಕಾಗಿರುವುದರಿಂದ ಅಂಗಿಯ ಹೆಗಲ ಭಾಗದಲ್ಲಿ ಅದು ಬೇಗ ಹರಿದು ಹೋಗಿ ಬಿಡುವ ಸಾಧ್ಯತೆ ಇರುವುದರಿಂದ, ಆ ಭಾಗಗಳಲ್ಲಿ ಒಂದೆರಡು ಪಟ್ಟಿ ಹೆಚ್ಚಿಗೆ ಇರಿಸಬೇಕೆಂದೂ ಹೇಳಿದರು. ಎಷ್ಟು ಮಣ್ಣಾದರೂ ಕಾಣಬಾರದೆಂಬ ಉದ್ದೇಶದಿಂದ ಮಣ್ಣಿನ ಬಣ್ಣವನ್ನೇ ಆರಿಸಲಾಯಿತು. ಅಂಗಿ-ಚೆಡ್ಡಿ ಸಿದ್ಧವಾಗುವ ಹೊತ್ತಿಗೆ ಅಪ್ಪ ಮತ್ತೆ ಆ ಜಾತಕ ಬರೆದ ಪುಣ್ಯಾತ್ಮನಲ್ಲಿಗೆ ಹೋಗಿ "ಹೇಗೂ ಮಗನಿಗೆ ವಿದ್ಯಾಯೋಗ ಇಲ್ಲ. ಆದರೂ ಜಾತಕ ನೋಡಿ ಒಳ್ಳೆ ದಿನ ಗೊತ್ತು ಮಾಡಿಕೊಡಿರಿ" ಎಂದು ಬೇಡಿಕೊಂಡ ಪ್ರಕಾರ ಆತ ಆಗಸ್ಟ್ ತಿಂಗಳಲ್ಲಿ ಒಂದು ದಿನ ಗೊತ್ತು ಮಾಡಿಕೊಟ್ಟು, ’ಒಳ್ಳೆಯದಾಗಲಿ’ ಎಂದು ಹರಸಿದ.
ನಿರೀಕ್ಷಿಸಿದಂತೆ ಶಾಲೆಗೆ ಸೇರುವ ಮುನ್ನಾ ದಿನ ಹೊಸ ಅಂಗಿ-ಚೆಡ್ಡಿ ಬಂತು. ಆದರೆ ಅದಕ್ಕೆ ಆತ ಇಸ್ತ್ರಿ ಮಾಡಿರಲಿಲ್ಲ. ಇಸ್ತ್ರಿ ಹಾಕಿದ ಅಂಗಿ ಹೇಗೆ ಗರಿ ಗರಿಯಾಗಿ ಇರುತ್ತದೆ ಎಂಬುದನ್ನು ಪಂಜದ ಜಾತ್ರೆಯಲ್ಲಿ ನೋಡಿದ್ದ ನನಗೆ ಒಂದು ಉಪಾಯ ಹೊಳೆಯಿತು. ನಾನೇ ಅಂಗಿ-ಚೆಡ್ಡಿಗಳನ್ನು ಚೆನ್ನಾಗಿ ಮಡಚಿದೆ. ಪಂಜದಿಂದ ಆಗೀಗ ಅಪ್ಪ ತರುತ್ತಿದ್ದ ಆಗಣ ’ನವಭಾರತ’ ಪತ್ರಿಕೆಯಲ್ಲಿ ಅದನ್ನು ಇರಿಸಿ, ಸ್ವಲ್ಪ ಸ್ಥೂಲ ಕಾಯಕರಾಗಿದ್ದ ಅಪ್ಪನನ್ನು ಅದರ ಮೇಲೆ ಕುಳಿತುಕೊಳ್ಳಲು ವಿನಂತಿಸಿಕೊಂಡೆ. ಅದಕ್ಕೊಪ್ಪಿದ ಅಪ್ಪ ಸಮಯ ಸಿಕ್ಕಾಗಲೆಲ್ಲ ಅದರ ಮೇಲೆ ಕುಳಿತು ’ಕುಂಡೆ ಇಸ್ತ್ರಿ’ಗೆ ಸಹಕರಿಸಿದರು.
ಆ ದಿನ ಶಾಲೆಗೆ ಹೊರಡಲು ಸಿದ್ಧನಾದೆ. ಎಲ್ಲಕ್ಕಿಂತ ಕಾತರ ಅಮ್ಮನದಾಗಿತ್ತು. ’ಮಗುವನ್ನು ಶಾಲೆವರೆಗೂ ಕರೆದುಕೊಂಡು ಹೋಗಬೇಕು. ಅವ ಹಿಂದೆ ಬರುವಾಗ ಹೊಳೆವರೆಗೆ ಬರಲಿ, ಹೊಳೆದಾಟಿಸಲು ನಾನಿದ್ದೇನೆ’ ಅಂತ ಅಪ್ಪನಿಗೆ ಹೇಳಿದರು. ನಾನು ನವಭಾರತದ ಕಟ್ಟೊಳಗಿಂದ ಅಂಗಿ-ಚೆಡ್ಡಿಗಳನ್ನು ತೆಗೆಯತೊಡಗಿದ್ದಂತೆ ನನ್ನ ಕೈಕಾಲುಗಳೆಲ್ಲ ತಣ್ಣಗಾಗಿಬಿಟ್ಟಿತು. ಅಪ್ಪನ ಕುಂಡೆ ಇಸ್ತ್ರಿಯ ಪರಿಣಾಮವಾಗಿ ನವಭಾರತ ಪತ್ರಿಕೆಯ ಅಕ್ಷರಗಳೆಲ್ಲ ನನ್ನ ಹೊಸ ಅಂಗಿಯ ಮೇಲೆ ಅಕರಾಳ-ವಿಕರಾಳವಾಗಿ ಮೂಡಿ ಹೊಸ ವಿನ್ಯಾಸವೊಂದು ಸಿದ್ಧಗೊಂಡಿತ್ತು. ಬಳಬಳನೆ ಕಣ್ಣೀರು ಉರುಳತೊಡಗಿತು. ಮೆಲ್ಲನೆ ಅಂಗಿಯ ಮೇಲೆ ಕೈಯಾಡಿಸಿದೆ. ಪತ್ರಿಕೆಯ ಶಾಯಿ ಇನ್ನಷ್ಟು ಹರಡಿಕೊಂಡಿತು. "ನಿನ್ನ ಹಣೆಯಲ್ಲಿ ವಿದ್ಯೆ ಬರೆದಿಲ್ಲ" ಎಂಬ ಅಪ್ಪನ ಉದ್ಗಾರ ಸ್ವಲ್ಪ ಗಡುಸಾಗಿಯೇ ಕೇಳಿತು.
ಏನಿದ್ದರೂ ಅಂಗಿಯ ಭುಜದ ಭಾಗ ದಪ್ಪಗಾಗಿ ಸುಮಾರಾಗಿ ನನ್ನ ಕಿವಿವರೆಗೆ ತಲುಪಿ ನಿಂತಿತ್ತು. ಚೆಡ್ಡಿ ಕಾಣದಂತೆ ಅಂಗಿ ಮೊಣಕಾಲಿನವರೆಗೆ ಚಾಚಿಕೊಂಡಿತ್ತು. ಅಮ್ಮ ಕೊಟ್ಟ ಚೀಲ ಹೆಗಲಿಗೇರಿಸಿ, ಗೊರಬೆಯೊಳಗೆ ನಿಂತೆ. ಆ ಗೊರಬೆ ನನ್ನ ಸೈಜಿನದಾಗಿರಲಿಲ್ಲವಾಗಿದ್ದರಿಂದ ತಲೆಯ ಮೇಲಿಂದ ಕೆಳಗಿನವರೆಗೆ ಚಾಚಿಕೊಂಡು ನಡೆದಾಗ ನೆಲಕ್ಕೆ ತಾಗಿ ಬರ ಬರನೆ ಸದ್ದು ಮಾಡುತ್ತಿತ್ತು. ಸ್ವಲ್ಪ ಬಗ್ಗಿದರೆ ಗೊರಬೆಯ ಹಿಂಭಾಗ ಮೇಲಕ್ಕೇಳುತ್ತಿತ್ತು, ಹಾಗಾಗಿ ಬೆನ್ನು ಬಗ್ಗಿಸಿ ನಡೆಯುವುದು ಅನಿವಾರ್ಯವಾಗಿತ್ತು. ಹೇಗೋ ಸುಧಾರಿಸಿಕೊಂಡು, ಒಂದು ಕೈಯಲ್ಲಿ ಬುತ್ತಿ, ಇನ್ನೊಂದು ಕೈಯಲ್ಲಿ ಮೈಮೇಲೇರುವ ಜಿಗಣೆಗಳನ್ನು ಉದುರಿಸಲು ಬಟ್ಟೆಯಲ್ಲಿ ಕಟ್ಟಿಕೊಂಡ ಉಪ್ಪು, ಹೆಗಲ ಮೇಲೆ ಚೀಲ, ತಲೆಯ ಮೇಲೆ ಗೊರಬೆ ಇರಿಸಿಕೊಂಡು, ಅಪ್ಪನ ಹಿಂದೆ ಹೆಜ್ಜೆ ಹಾಕುತ್ತಾ ಸುಮಾರು ೫ ಕಿ.ಮೀ. ನಡೆದು ೧೨ ಗಂಟೆ ಸುಮಾರಿಗೆ ಶಾಲೆಗೆ ತಲುಪಿದೆ.
ಜಾತಕ ಬರೆದ ಜೋಯಿಸರು ತಿಳಿಸಿದಂತೆ ಆ ದಿವಸ ಬಹಳ ಒಳ್ಳೆಯ ದಿವಸವಾಗಿತ್ತು. ಆ ಕಾರಣಕ್ಕಾಗಿಯೇ ಶಾಲೆಗೆ ರಜೆ ಸಾರಲಾಗಿತ್ತು! ಅಪ್ಪ ದಿಗ್ಭ್ರಾಂತರಾಗಿದ್ದರು. ನನಗೇನೂ ತೋಚಲಿಲ್ಲ. ನನ್ನನ್ನು ಮನೆಗೆ ಹಿಂದಿರುಗಲು ಹೇಳಿ ಅಪ್ಪ ಪಂಜದ ಕಡೆ ನಡೆದರು. ನಾನು ಮನೆ ಕಡೆಗೆ ಹಿಂದಿರುಗಿದೆ.
ನಿರೀಕ್ಷಗೂ ಮುನ್ನ ಒಂಟಿಯಾಗಿಯೇ ಮನೆಗೆ ಹಿಂದಿರುಗಿದ ನನ್ನನ್ನು ಕಂಡ ಅಮ್ಮನ ಕಣ್ಣಲ್ಲಿ ನೀರು. ಈಗ ಅಪ್ಪ ಅಮ್ಮ ಇಬ್ಬರೂ ಇಲ್ಲ. ಜಾತಕ ಬರೆದ ಜೋಯಿಸರೂ ಇಲ್ಲ. ನನಗೆ ಇವನ್ನೆಲ್ಲ ಬರೆಯುವಷ್ಟು ವಿದ್ಯೆ ಸಿಕ್ಕಿದೆ. ಜಾತಕ ಅನಾಥವಾಗಿ ಬಿದ್ದುಕೊಂಡಿದೆ
Published in Vijayakarnataka paper on October16, 2011